ಪುಟಗಳು

ಶುಕ್ರವಾರ, ಜನವರಿ 10, 2025

ಸಾರಿಕಾ ಎಸ್.ಗಂಗಾ

ಕವಯತ್ರಿ ಸಾರಿಕಾ ಎಸ್.ಗಂಗಾ ರವರು ಬೀದರ ಜಿಲ್ಲೆ ಚಿಟಗುಪ್ಪದ ಹಣಮಂತರಾವ ಹಾಗೂ ಸರಸ್ವತಿ ದಂಪತಿಗಳಿಗೆ ದಿನಾಂಕ ೨೦-೦೮-೧೯೮೧ರಲ್ಲಿ ಜನಿಸಿದ್ದಾರೆ. ಎಂ.ಎ.ಬಿ.ಎಡ್ ಪದವಿಧರರಾದ ಇವರು ಹುಮನಾಬಾದ ತಾಲೂಕಿನ ಬೆನಚಿಂಚೋಳಿ ಸರಕಾರ ಪ್ರೌಢ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ದುಬಲಗುಂಡಿಯ ಸುಧೀರ ಗಂಗಾ ರವರ ಧರ್ಮ ಪತ್ನಿಯಾಗಿದ್ದು, `ನೆನಪಿನ ಕಾರಂಜಿ' ಎಂಬ ಕವನಸಂಕಲನ ಪ್ರಕಟಿಸಿದ್ದಾರೆ. ಅಷ್ಟೇಯಲ್ಲದೆ ಹಲವಾರು ಸಾಹಿತ್ಯ ಸಮ್ಮೇಳನದ ಕವಿಗೊಷ್ಠಿಗಳಲ್ಲಿ ಪಾಲ್ಗೊಂಡು ಕವಿತೆ ವಾಚನ ಮಾಡಿದ್ದಾರೆ .ಮತ್ತು ತಮ್ಮ ಶಾಲಾ ಮಕ್ಕಳಿಗೆ ಸಾಹಿತ್ಯ ಅಭಿರುಚಿ ಬೆಳೆಸಿ ಅವರ ಸಾಹಿತ್ಯ ರಚನೆಗೆ ಪ್ರೊತ್ಸಾಹಿಸಿ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಪ್ರೇರಣೆ ನೀಡಿ ಪ್ರೊತ್ಸಾಹಿಸುತ್ತಿದ್ದಾರೆ. ಇವರಿಗೆ ತಾಲೂಕಿನ `ಉತ್ತಮ ಶಿಕ್ಷಕಿ ಪ್ರಶಸ್ತಿ, ಹಾಗೂ ಬೀದರ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿ ಪ್ರಶಸ್ತಿ, `ಕ್ರಿಯೇಟಿವ್ ಸೈನ್ಸ ಟೀಚರ್ ಅವಾರ್ಡ' ಇತ್ಯಾದಿ ಪಡೆದಿದ್ದಾರೆ . ಮಂಡ್ಯದಲ್ಲಿ ಇವರಿಗೆ ರಾಜ್ಯ ಮಟ್ಟದ ಕಾವ್ಯಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ