ಪುಟಗಳು

ಮಂಗಳವಾರ, ಜನವರಿ 14, 2025

ಸಂಗಮೇಶ ಜ್ಯಾಂತೆ

ಯುವ ಸಾಹಿತಿ ಸಂಗಮೇಶ ಜ್ಯಾಂತೆ ಯವರು ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಜೈನಾಪೂರ ಗ್ರಾಮದ ಬಾಬುರಾವ ಮತ್ತು ಭಾಗೀರಥಿ ದಂಪತಿಗಳಿಗೆ ದಿನಾಂಕ ೧೪-೧೧-೧೯೮೮ರಲ್ಲಿ ಜನಿಸಿದ್ದಾರೆ. ಪದವಿಧರರಾದ ಇವರು ಸಾಹಿತ್ಯ ರಚನೆಯಲ್ಲಿ ತೊಡಗಿ ನೂರಾರು ಕವನ ಲೇಖನಗಳನ್ನು ಬರೆದು ಪರಿಚಿತರಾಗಿದ್ದಾರೆ. ಮತ್ತು ಕವನ ಸಂಕಲನವು ಕೂಡ ಮುದ್ರಿಸುವ ತವಕದಲ್ಲಿದ್ದಾರೆ. ಇವರು ಬೀದರ ಜಿಲ್ಲಾ ಕನ್ನಡ ಸಾಹಿತ್ಯ ವೇದಿಕೆಯ ಅಧ್ಯಕ್ಷರಾಗಿ, ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿಯಾಗಿ, ಭಾಲ್ಕಿ ತಾಲೂಕಿನ ಮಕ್ಕಳ ಸಾಹಿತ್ಯ ಪರಿಷತ್ತು ಸೇರಿದಂತೆ ವಿವಿಧ ಆರೇಳು ಸಂಘ ಸಂಸ್ಥೆಗಳಲ್ಲಿ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಸಾಹಿತ್ಯ ಚಟುವಟಿಕೆಗಳನ್ನು ಗುರುತಿಸಿ ಕೆರಳದ ಕಾಸರಗೋಡಿನಿಂದ 'ಕಾಯಕ ರತ್ನ ಪ್ರಶಸ್ತಿ' ಮತ್ತು ಹಾಸನದ ಕವಿ ಸಮ್ಮೇಳನದ ರಾಜ್ಯ ಪ್ರಶಸ್ತಿ ಸೇರಿದಂತೆ ಮೊದಲಾದ ಪ್ರಶಸ್ತಿ ಪುರಸ್ಕಾರಗಳು ಪಡೆದಿದ್ದಾರೆ. ಸದ್ಯ ಇವರು ಬೀದರದ ನಿವಾಸಿಯಾಗಿ ಸ್ವಯಂ ವೃತ್ತಿಯಲ್ಲಿ ತೊಡಗಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ