ಪುಟಗಳು

ಶುಕ್ರವಾರ, ಜನವರಿ 10, 2025

ವೀರೇಶಕುಮಾರ್ ಮಠಪತಿ

ಪತ್ರಕರ್ತ ಹಾಗೂ ಸಾಹಿತಿಗಳಾದ ವೀರೇಶಕುಮಾರ್ ಮಠಪತಿಯವರು ಬೀದರ ಜಿಲ್ಲೆ ಚಿಟಗುಪ್ಪ ತಾಲೂಕಿನ ನಿರ್ಣಾ ಗ್ರಾಮದ ದಿ.ವೇ.ನಾಗಯ್ಯ ಸ್ವಾಮಿ ಮತ್ತು ಸಂಗಮ್ಮ ದಂಪತಿಗಳಿಗೆ ದಿನಾಂಕ ೧೬-೨-೧೯೭ರಲ್ಲಿ ಜನಿಸಿದ್ದಾರೆ. ಬಿ.ಎಸ್ಸಿ.ಎಂ.ಎ.ಎA.ಎಡ್.ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದು ೨೦೦೪ರಲ್ಲಿ ಪ್ರಜಾವಾಣಿ ಪತ್ರಿಕೆಯ ವರದಿಗಾರರಾಗಿ, ನಂತರ `ಕಸ್ತೂರಿ ಕಿರಣ' ಎಂಬ ಪಾಕ್ಷಿಕ ಪತ್ರಿಕೆಯ ಪ್ರಧಾನ ಸಂಪಾದಕರಾಗಿ, ಸದ್ಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಲ್ಲಿಯೇ ಸಾಹಿತ್ಯದ ಆಸಕ್ತಿ ಬೆಳೆಸಿಕೊಂಡ ಇವರು `ದಾರಿ ದೀಪ' ಮತ್ತು `ಮುಕ್ತಿ ಮಠದ ಧರ್ಮ ದೀಪ' ಎಂಬ ಕೃತಿಗಳು ಹೊರತಂದಿದ್ದಾರೆ. ೧೯೮೪ರಲ್ಲಿ ಸುಧಾ ವಾರ ಪತ್ರಿಕೆಯ ರಾಜ್ಯ ಮಟ್ಟದ `ಮಕ್ಕಳ ಕಥಾ' ಸ್ಪರ್ಧೆಯಲ್ಲಿ ಇವರ `ಜಾಣ ನರಿ' ಕತೆ ಪ್ರಥಮ ಬಹುಮಾನ ಪಡೆದು ಪ್ರಕಟವಾಗಿದೆ. ಇವರು ಸಾಹಿತ್ಯ ಹಾಗೂ ಸಂಘಟನೆಯೊAದಿಗೆ ಪತ್ರಿಕಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿರುವುದನ್ನು ಕಂಡು ೧೨ನೇ ಚಿಟಗುಪ್ಪ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೌರವಿಸಲಾಗಿದೆ. ಇವರು ಶಿಕ್ಷಣ ಕ್ಷೇತ್ರದಲ್ಲಿಯು ತುಂಬ ಕಾಳಜಿಯುಳ್ಳವರಾಗಿದ್ದರಿಂದ `ಪೂಜ್ಯ ವೇ.ನಾಗಯ್ಯ ವೀರಯ್ಯ ಮಠಪತಿ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ ಪ್ರಾಥಮೀಕ ಪ್ರೌಢ ಶಾಲೆಗಳ ಮೂಲಕ ಶಿಕ್ಷಣ ನೀಡುತ್ತಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ