ಸೋಮವಾರ, ಜನವರಿ 20, 2025
ಸಂಗಮ್ಮ ಚ.ಬಮ್ಮಣಿ
ಸಾಹಿತಿ ಸಂಗಮ್ಮ ಚ. ಬಮ್ಮಣಿ ಯವರು ಬೀದರ ಜಿಲ್ಲೆ ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ಗ್ರಾಮದ ವಿಠಲರಾವ ಜೂಜಾ ಮತ್ತು ತೋಟಮ್ಮಾ ದಂಪತಿಗಳಿಗೆ ದಿನಾಂಕ 1-6-
1973 ರಲ್ಲಿ ಜನಿಸಿದ್ದಾರೆ. ಎಂ.ಎ. ಬಿ.ಎಡ್, ಎಂ.ಎ. ಸಮಾಜ ಶಾಸ್ತ್ರ, ಎಂ.ಎ. ರಾಜ್ಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದ ವಿಧರರಾದ ಇವರು 1997 ರಲ್ಲಿ ಹುಮನಾಬಾದ ತಾಲೂಕಿನ ಜಲಸಂಗಿ ಗ್ರಾಮದ ಪ್ರೌಢ ಶಾಲಾ ಶಿಕ್ಷಕರಾಗಿ ಸೇವೆಗೆ ಸೇರಿ ಹಲವಾರು ವರ್ಷ ಸೇವೆ ಸಲ್ಲಿಸಿದ ಇವರು ಸದ್ಯ ಹಳ್ಳಿಖೇಡ (ಕೆ) ಗ್ರಾಮದ ಪ್ರೌಢ ಶಾಲೆಯ ಉಪಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ವಿದ್ಯಾರ್ಥಿಯಾಗಿದಾಗಲೆ ಕತೆ ಕವನ ಲೇಖನ ಪ್ರಬಂಧ ಚುಟುಕುಗಳನ್ನು ಬರೆಯುವ ಗೀಳು ಬೆಳೆಸಿಕೊಂಡು ಕೆಲವು ಕೃತಿಗಳನ್ನು ರಚಿಸಿದ್ದಾರೆ. ಅವುಗಳೆಂದರೆ, 2015 ರಲ್ಲಿ 'ಅರಳುವ ಪ್ರತಿಭೆ' ಎಂಬ ವ್ಯಕ್ತಿತ್ವ ವಿಕಸನದ ಕೃತಿಯೊಂದು ಹೊರತಂದು 2017 ರಲ್ಲಿ 'ಮಹಾತಾಯಿ' ಎಂಬ ಕವನ ಸಂಕಲನವು ಪ್ರಕಟಿಸಿದ್ದಾರೆ. ಅಷ್ಟೇಯಲ್ಲದೆ ಇವರ ಬರಹಗಳು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಇವರಿಗೆ 2017ರಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, 2018 ರಲ್ಲಿ ಪರಿಸರ ವಾಹಿನಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ, ಸೇರಿದಂತೆ ಮೊದಲಾದ ಪ್ರಶಸ್ತಿ ಪುರಸ್ಕಾರಗಳು ಪಡೆದಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ