ಮಂಗಳವಾರ, ಜನವರಿ 14, 2025
ಶಾಂತಕುಮಾರ ಹಡಪದ
ಉದಯೋನ್ಮುಖ ಬರಹಗಾರ ಶಾಂತಕುಮಾರ ಹಡಪದ ರವರು ಬಸವಕಲ್ಯಾಣ ತಾಲೂಕಿನ ಹೀರೆನಾಗಾಂವ ಗ್ರಾಮದ ಶಿವಲಿಂಗಪ್ಪ ಮತ್ತು ಮಹಾದೇವಿ ದಂಪತಿಗಳಿಗೆ ದಿನಾಂಕ ೫-೧೦-೧೯೮೩ರಲ್ಲಿ ಜನಿಸಿದ್ದಾರೆ. ಎಸ್.ಎಸ್.ಎಲ್.ಸಿ ವರೆಗೆ ಅಧ್ಯಯನ ಮಾಡಿದ ಇವರು ಸ್ವಯಂ ವೃತ್ತಿಯಿಂದ ಜೀವನ ಸಾಗಿಸುತ್ತಿದ್ದಾರೆ. ಮತ್ತು ಸಾಹಿತ್ಯದಲ್ಲಿ ಆಸಕ್ತರಾಗಿ ಕವನ, ಆಧುನಿಕ ವಚನ, ಭಜನೆ ಹಾಡು, ತತ್ವ ಪದಗಳನ್ನು ಬರೆದು `ನನ್ನವ್ವ' ಎಂಬ ಕವನ ಸಂಕಲನವು ಪ್ರಕಟಿಸುವ ಹಂತದಲ್ಲಿದ್ದಾರೆ. ನೂರಾರು ಕವನ, ಆಧುನಿಕ ವಚನಗಳು ಬರೆದಿದ್ದು, ಅವುಗಳಲ್ಲಿ ಕೆಲವು ವಿಜಯವಾಣಿ ಮೊದಲಾದವುಗಳಲ್ಲಿ ಪ್ರಕಟವಾಗಿವೆ. ಇವರು ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಯಾಗಿ, ಮತ್ತು ಹೀರೆನಾಗಾಂವ ಗ್ರಾಮದಲ್ಲಿ ನಡೆದ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ ಇವರಿಗೆ ಬಸವಕಲ್ಯಾಣದ ಹಡಪದ ಸಮಾಜದ ವತಿಯಿಂದ ಹಡಪದ ಅಪ್ಪಣ್ಣ ಪ್ರಶಸ್ತಿಯು ನೀಡಿ ಗೌರವಿಸಲಾಗಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ