ಮಂಗಳವಾರ, ಜನವರಿ 14, 2025
ಅರವಿಂದ ಕುಲಕರ್ಣಿ.
ಹವ್ಯಾಸಿ ಬರಹಗಾರರಾದ ಅರವಿಂದ ಕುಲಕರ್ಣಿ ಯವರು ಬೀದರ ತಾಲೂಕಿನ ಬಾವಗಿ ಗ್ರಾಮದ ದತ್ತಾತ್ರೇಯರಾವ ಮತ್ತು ಶಾಂತಾಬಾಯಿ ದಂಪತಿಗಳಿಗೆ ದಿನಾಂಕ ೧-೬-೧೯೭೧ ರಲ್ಲಿ ಜನಿಸಿದ್ದಾರೆ. ಡಿ.ಎಂ.ಎಲ್.ಟಿ. ಪದವಿಧರರಾದ ಇವರು ಬೀದರ ಸರ್ಕಾರಿ ಆಸ್ಪತ್ರೆಯಲ್ಲಿ ವೈಧ್ಯಕೀಯ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯದಲ್ಲಿ ತುಂಬ ಆಸಕ್ತರಾಗಿ ಕವನ, ಲೇಖನ, ಬರಹಗಳು ಸಾಮಾಜಿಕ, ಶೈಕ್ಷಣಿಕ, ಪರಿಸರ ಮತ್ತು ಆರೋಗ್ಯದ ಕುರಿತು ರಚನೆ ಮಾಡುತ್ತಿದ್ದಾರೆ. ಇವರ ಬರಹಗಳು ಅನೇಕ ಪತ್ರಿಕೆ ಹಾಗೂ ಪ್ರಾತಿನಿಧಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಇವರ ಪ್ರಗತಿ ಮತ್ತು ಶಿಕ್ಷಣ ಸಂಸ್ಥೆ ಅಡಿಯಲ್ಲಿ ಹಲವಾರು ಸಾಹಿತ್ಯೀಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾರೆ. ಮತ್ತು ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರಿಗೆ ಬೀದರ ಧೇಶಪಾಂಡೆ ಪ್ರತಿಷ್ಠಾನದ ವತಿಯಿಂದ ಕವಿ ಭಾರ್ಗವಿ, ಪರಿಸರ ರತ್ನ, ಆದರ್ಶ ದಂಪತಿಗಳು, ಬಸವ ಕಾಯಕ ರತ್ನ ಮೊದಲಾದ ಪ್ರಶಸ್ತಿ ಪುರಸ್ಕಾರಗಳು ನೀಡಿ ಗೌರವಿಸಿದ್ದಾರೆ..
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ