ಪುಟಗಳು

ಮಂಗಳವಾರ, ಜನವರಿ 14, 2025

ಡಾ.ಶ್ರೇಯಾ ಯಶಪಾಲ್ ಮಹಿಂದ್ರಕರ್

ಕವಯತ್ರಿ ಡಾ. ಶ್ರೇಯಾ ಯಶಪಾಲ್ ಮಹಿಂದ್ರಕರ್ ರವರು ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹೊಳಲು ಗ್ರಾಮದ ಪಾಂಡುರAಗರಾವ ಮತ್ತು ನಾಗರತ್ನ ದಂಪತಿಗಳಿಗೆ ದಿನಾಂಕ ೧-೪-೧೯೮೪ರಲ್ಲಿ ಜನಿಸಿದ್ದಾರೆ. ಬಿ.ಎ.ಎಂ.ಎಸ್.ಡಿ.ಎನ್.ಎಚ್.ಇ. ಎಂ.ಎಸ್.ಡೆಬ್ಲು ಸ್ನಾತಕೋತ್ತರ ಪದರವಿಧರರಾದ ಇವರು ಕೆಲ ವರ್ಷ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಬೆಂಡಿಗಾನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯುಷ್ಯ ಮೆಡಿಕಲ್ ಆಫಿಸರ್ ಆಗಿ ಸೇವೆ ಸಲ್ಲಿಸಿದ್ದಾರೆ. ಮತ್ತು ವಿವಾಹವಾದ ನಂತರ ಪತಿ ಡಾ. ಯಶಪಾಲ್ ಮಹಿಂದ್ರಕರ್ ರವರೊಂದಿಗೆ ಬೀದರಗೆ ಬಂದು ಇಲ್ಲಿಯು ಕೆಲವರ್ಷ ದಿಲ್ಲಿ ಪ್ಯಾರಾ ಮೇಡಿಕಲ್ ಇನ್ಸ್ಟಿಟ್ಯೂಟ್‌ನ ಪ್ರಿನ್ಸಿಪಾಲ್‌ರಾಗಿ ಸೇವೆ ಸಲ್ಲಿಸಿದ್ದಾರೆ. ವೃತ್ತಿಯಲ್ಲಿ ವೈದ್ಯರಾದರೂ ಪ್ರವೃತ್ತಿಯಲ್ಲಿ ಕವಯತ್ರಿಯಾಗಿ ಗುರುತಿಸಿಕೊಂಡ ಇವರು ತಮ್ಮ ಪತಿ ಬ್ರೀಮ್ಸ್ ಸರ್ಕಾರಿ ಆಸ್ಪತ್ರೆಯಲ್ಲಿ ೧೫ ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಗೃಹಿಣಿಯಾಗಿದ್ದುಕೊಂಡು ೨೦೨೦ರಲ್ಲಿ `ಚೈತ್ರದ ಚಿಗುರು' ಎಂಬ ಕವನ ಸಂಕಲನ ಪ್ರಕಟಿಸಿದ್ದಾರೆ. ಇವರಿಗೆ ಬೀದರದ ಮಂದಾರ ಕಲಾವಿದರ ವೇದಿಕೆ ಹಾಗೂ ದೇಶಪಾಂಡೆ ಪ್ರತಿಷ್ಠಾನದ ವತಿಯಿಂದ ಕಾವ್ಯ ರತ್ನ, ಇತ್ಯಾದಿ ಪ್ರಶಸ್ತಿಗಳು ಲಭಿಸಿವೆ. ಇವರು ಕವನ ಲೇಖನ ಬರಹಗಳು ಬರೆದಿದ್ದು ಅವು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ