ಮಂಗಳವಾರ, ಜನವರಿ 14, 2025
ಬಸವರಾಜ ದಯಾಸಾಗರ
ಸಾಹಿತಿ ಬಸವರಾಜ ದಯಸಾಗರ ರವರು ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ನಿಂಬಾಳ ಗ್ರಾಮದ ಅರ್ಜುನ ಮತ್ತು ಸರಸ್ವತಿಬಾಯಿ ದಂಪತಿಗಳಿಗೆ ದಿನಾಂಕ ೫-೨-೧೯೭೨ರಲ್ಲಿ ಜನಿಸಿದ್ದಾರೆ. ಬಿ.ಎ ಪದವಿಧರರಾದ ಇವರು ಹುಮನಾಬಾದಿನ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಉಪಗೃಹದ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಿದ್ಯಾರ್ಥಿಯಾಗಿದಾಗಲೆ ಸಾಹಿತ್ಯದ ಅಭಿರುಚಿ ಹಚ್ಚಿಕೊಂಡು ಬರವಣಿಗೆಯಲ್ಲಿ ತೊಡಗಿ ಬೆಂಗಳೂರಿನ ಜಾಣಗೆರೆ ವೆಂಕಟರಾಮಯ್ಯನವರ `ಮಾರ್ಧನಿ' ಪತ್ರಿಕೆಯ ವಿಜಯಪುರ ಜಿಲ್ಲಾ ವರದಿಗಾರರಾಗಿ ಸೇವೆಸಲ್ಲಿಸಿದ್ದಾರೆ. ಹಲವಾರು ಬರಹ ಲೇಖನಗಳು ಬರೆದು ಸಾಹಿತಿ ಕವಿಯಾಗಿ ಗುರುತಿಸಿಕೊಂಡಿದ್ದಾರೆ. ಮತ್ತು `ಅಪರೂಪದ ಸಾಹಿತಿ ಎಂ.ಜಿ.ದೇಶಪಾAಡೆ' ಎಂಬ ಕೃತಿ ಪ್ರಕಟಿಸಿದ್ದಾರೆ. . ಇವರ ಬರಹಗಳು ಸುಧಾ, ಕರ್ಮವೀರ, ತುಷಾರ, ಇತ್ಯಾದಿಗಳಲ್ಲಿ ಪ್ರಕಟವಾಗಿವೆ. ಮತ್ತು ಬೀದರನಲ್ಲಿ ನಡೆದ ೭೨ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಪ್ರಕಟಿಸಿದ `ಭಾಹತ್ತರ' ಕವನ ಸಂಕಲನದಲ್ಲಿ ಇವರ ಕವಿತೆ ಪ್ರಕಟವಾಗಿದೆ. ಇವರಿಗೆ ಹುಲಸೂರು ತಾಲೂಕಿನ ಬೇಲೂರಿನಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಪ್ರಥಮ ಸಾಹಿತ್ಯ ಸಮ್ಮೇಳನದಲ್ಲಿ ಕಾರಾಗೃಹ ರತ್ನ ಪ್ರಶಸ್ತಿ, ಮಂದಾರ ಕಲಾವಿದರ ವೇದಿಕೆಯಿಂದ ಬೇಂದ್ರೆ ಕಾವ್ಯ ರತ್ನ ಪ್ರಶಸ್ತಿ, ಬೀದರನಲ್ಲಿ ನಡೆದ ಅಖಿಲ ಭಾರತ ದ್ವಿತೀಯ ಕವಿಕಾವ್ಯ ಸಮ್ಮೇಳನದಲ್ಲಿ ಕಾವ್ಯ ಕಲಾ ಭೂಷಣ ಪ್ರಶಸ್ತಿ, ದೇಶಪಾಂಡೆ ಪ್ರತಿಷ್ಠಾನದಿಂದ ಕಾವ್ಯ ಚೂಡಾಮಣಿ ರತ್ನ ಪ್ರಶಸ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಜರತ್ನಂ ಪ್ರಶಸ್ತಿ’ ಸೇರಿದಂತೆ ಮೊದಲಾದವು ಪಡೆದಿದ್ದಾರೆ. ಇವರು ಬೀದರ ಜಿಲ್ಲೆಯಲ್ಲಿ ೧೨ ವರ್ಷದಿಂದ ಸೇವೆ ಸಲ್ಲಿಸುತ್ತಾ ಇಲ್ಲಿಯ ನಿವಾಸಿಯಾಗಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ