ಪುಟಗಳು

ಹುಲಸೂರು ತಾಲೂಕಿನ ಹವ್ಯಾಸಿ ಬರಹಗಾರರು ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಹುಲಸೂರು ತಾಲೂಕಿನ ಹವ್ಯಾಸಿ ಬರಹಗಾರರು ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಮಂಗಳವಾರ, ಜನವರಿ 14, 2025

ದೇವಿಂದ್ರ ವೀ. ಬರಗಾಲೆ

ಯುವ ಬರಹಗಾರ ದೇವಿಂದ್ರ ವೀ.ಬರಗಾಲೆ ಯವರು ಹುಲಸೂರು ತಾಲೂಕಿನ ಬೇಲೂರು ಗ್ರಾಮದ ವೀರಣ್ಣ ಮತ್ತು ಚೆನ್ನಮ್ಮ ದಂಪತಿಗಳಿಗೆ ದಿನಾಂಕ ೪-೭-೧೯೮೦ರಲ್ಲಿ ಜನಿಸಿದ್ದಾರೆ. ಬಿ.ಎ.ಬಿ.ಇಡಿ ಪದವಿಧರರಾದ ಇವರು ೨೦೦೬ರಲ್ಲಿ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆಗೆ ಸೇರಿ, ನಂತರ ೨೦೨೦ರಿಂದ ಕಲಬುರಗಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಲೆಕ್ಕ ಅಧಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕತೆ, ಕವನ, ಲೇಖನ, ಹನಿಗವನ, ಆಧುನಿಕ ವಚನ ಮೊದಲಾದವು ಬರೆದು ಸಾಹಿತ್ಯ ಕ್ಷೇತ್ರದಲ್ಲಿ ಗುರ್ತಿಸಿ ಕೊಂಡಿದ್ದಾರೆ. ಇವರ ಬರಹಗಳು ತುಷಾರ, ಸಂಯುಕ್ತ ಕರ್ನಾಟಕ ಮೊದಲಾದ ಪತ್ರಿಕೆಗಳಲ್ಲಿ ಮತ್ತು ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಮತ್ತು ೨೦೧೨ರಿಂದ ಡಾ.ಜಯದೇವಿ ತಾಯಿ ಲಿಗಾಡೆ ಪ್ರತಿಷ್ಠಾನದ ಸಂಸ್ಥಾಪಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ೫೦ಕ್ಕೂ ಹೆಚ್ಚು ಉಪನ್ಯಾಸ ಕಾರ್ಯಕ್ರಮಗಳು, ೨ ನಾಟಕ ಪ್ರದರ್ಶನ, ೨ ವಿಚಾರ ಸಂಕಿರಣಗಳನ್ನು ಏರ್ಪಡಿಸಿ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಮಾಡುತ್ತಿದ್ದಾರೆ. ಮತ್ತು ಬಸವಕಲ್ಯಾಣ ತಾಲೂಕಿನ ಕರ್ನಾಟಕ ಜಾನಪದ ಪರಿಷತ್ತಿನ ಕಾರ್ಯದರ್ಶಿಯಾಗಿ, ಕಸಾಪದ ಗೌರವ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಡಾ.ಭೀಮಾಶಂಕರ ಬಿರಾದಾರ

ಹವ್ಯಾಸಿ ಬರಹಗಾರ ಡಾ. ಭೀಮಾಶಂಕರ ಬಿರಾದಾರ ರವರು ಹುಲಸೂರು ತಾಲೂಕಿನ ಗಡಿಗೌಡಗಾಂವ ಗ್ರಾಮದ ಧೂಳಪ್ಪಾ ಮತ್ತು ಸರಸ್ವತಿ ದಂಪತಿಗಳಿಗೆ ದಿನಾಂಕ ೧-೨-೧೯೭೯ರಲ್ಲಿ ಜನಿಸಿದ್ದಾರೆ. ಎಂ.ಎ. ಪಿ.ಎಚ್.ಡಿ ಪದವಿಧರರಾದ ಇವರು ಬಸವಕಲ್ಯಾಣದ ಖಾಸಗಿ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. `ಸಾಮಾಜಿಕ ಕನ್ನಡ ಸಾಹಿತ್ಯ ವಿಮರ್ಶೆಯ ಗ್ರಹಿಕೆ' ಎಂಬುದು ಇವರ ಪಿ.ಎಚ್.ಡಿ.ಮಹಾಪ್ರಬಂಧವಾಗಿದೆ. ವಿದ್ಯಾರ್ಥಿದೆಸೆಯಿಂದಲೇ ಸಾಹಿತ್ಯದಲ್ಲಿ ಆಸಕ್ತರಾಗಿ ಕತೆ, ಕವನ, ಲೇಖನ, ಹನಿಗವನ, ಪ್ರಬಂಧ, ಸಂಶೋಧನೆ, ವಿಮರ್ಶೆ, ಮೊದಲಾದವು ಬರೆದಿದ್ದಾರೆ. ಮತ್ತು ಮಯೂರ, ವಿಜಯ ಕರ್ನಾಟಕ, ವಿಜಯವಾಣಿ, ಸಂಗತ, ನ್ಯಾಯಪಥ, ಅರಹು-ಕುರುಹು, ಏನ್ ಸುದ್ಧ, ಬುಕ್ ಬ್ರಹ್ಮ ಮೊದಲಾದ ಅಂತರಜಾಲ ಪತ್ರಿಕೆಗಳಲ್ಲಿ ಹಾಗೂ ಕೆಲ ಪ್ರಾತಿನಿಧಿಕ ಸಂಕಲನಗಳಲ್ಲಿ ಅವು ಪ್ರಕಟವಾಗಿವೆ. ಅಷ್ಟೇಯಲ್ಲದೆ ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನ, ವಿಚಾರ ಸಂಕಿರಣ ಮತ್ತು ಕಮ್ಮಟಗಳಲ್ಲಿ ಭಾಗವಹಿಸಿರುವ ಇವರು ಅನೇಕ ಕನ್ನಡಪರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಉಪನ್ಯಾಸಗಳನ್ನು ನೀಡಿದ್ದಾರೆ. ಬಸವಕಲ್ಯಾಣದ ಡಾ.ಜಯದೇವಿ ತಾಯಿ ಲಿಗಾಡೆ ಪ್ರತಿಷ್ಠಾನದ ನಿರ್ದೇಶಕರಾಗಿ, ಬಸವಕಲ್ಯಾಣ ಕಸಾಪದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ರೂಪಾ ಗಣೇಶ ಗುಡ್ಡಾ

ಕವಯತ್ರಿ ರೂಪ ಗಣೇಶ ಗುಡ್ಡಾ ರವರು ಹುಲಸೂರು ತಾಲೂಕಿನ ಬೇಲೂರು ಗ್ರಾಮದ ಕಲ್ಲಪ್ಪ ಮತ್ತು ಶಾಂತಮ್ಮ ದಂಪತಿಗಳಿಗೆ ದಿನಾಂಕ ೧೦-೯-೧೯೭೭ರಲ್ಲಿ ಜನಿಸಿದ್ದಾರೆ. ಎಂ.ಎ.ಬಿ.ಇಡಿ. ಪದವಿಧರರಾದ ಇವರು ಬೀದರ ಜಿಲ್ಲೆಯಲ್ಲಿ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಕನ್ನಡ ಸಾಹಿತ್ಯ ರಚನೆಯಲ್ಲಿ ತೊಡಗಿ ಕವನ, ಲೇಖನ, ಹನಿಗವನ ಮೊದಲಾದವು ಬರೆದಿದ್ದಾರೆ. ಮತ್ತು ಅವು ಕೆಲ ಪತ್ರಿಕೆ ಹಾಗೂ ಆಕಾಶವಾಣಿಯಲ್ಲಿಯು ಪ್ರಕಟ, ಪ್ರಸಾರವಾಗಿವೆ. ಅಷ್ಟೇಯಲ್ಲದೆ ಹಲವಾರು ಹೋಬಳಿ, ತಾಲೂಕು, ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ವಿವಿಧ ಕವಿಗೋಷ್ಠಿಗಳಲ್ಲಿ ಪಾಲ್ಗೊಂಡು ಕವನ ವಾಚನ ಮತ್ತು ಉಪನ್ಯಾಸವು ನೀಡಿದ್ದಾರೆ. ಇವರಿಗೆ ಹಲವು ಕನ್ನಡ ಪರ ಸಂಘ ಸಂಸ್ಥೆಗಳಿAದ ಸಾಕಷ್ಟು ಸಲ ಸತ್ಕರಿಸಿ ಗೌರವಿಸಲಾಗಿದೆ. ಡಾ.ಭೀಮಾಶಂಕರ ಬಿರಾದಾರ ಹವ್ಯಾಸಿ ಬರಹಗಾರ ಡಾ. ಭೀಮಾಶಂಕರ ಬಿರಾದಾರ ರವರು ಹುಲಸೂರು ತಾಲೂಕಿನ ಗಡಿಗೌಡಗಾಂವ ಗ್ರಾಮದ ಧೂಳಪ್ಪಾ ಮತ್ತು ಸರಸ್ವತಿ ದಂಪತಿಗಳಿಗೆ ದಿನಾಂಕ ೧-೨-೧೯೭೯ರಲ್ಲಿ ಜನಿಸಿದ್ದಾರೆ. ಎಂ.ಎ. ಪಿ.ಎಚ್.ಡಿ ಪದವಿಧರರಾದ ಇವರು ಬಸವಕಲ್ಯಾಣದ ಖಾಸಗಿ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. `ಸಾಮಾಜಿಕ ಕನ್ನಡ ಸಾಹಿತ್ಯ ವಿಮರ್ಶೆಯ ಗ್ರಹಿಕೆ' ಎಂಬುದು ಇವರ ಪಿ.ಎಚ್.ಡಿ.ಮಹಾಪ್ರಬಂಧವಾಗಿದೆ. ವಿದ್ಯಾರ್ಥಿದೆಸೆಯಿಂದಲೇ ಸಾಹಿತ್ಯದಲ್ಲಿ ಆಸಕ್ತರಾಗಿ ಕತೆ, ಕವನ, ಲೇಖನ, ಹನಿಗವನ, ಪ್ರಬಂಧ, ಸಂಶೋಧನೆ, ವಿಮರ್ಶೆ, ಮೊದಲಾದವು ಬರೆದಿದ್ದಾರೆ. ಮತ್ತು ಮಯೂರ, ವಿಜಯ ಕರ್ನಾಟಕ, ವಿಜಯವಾಣಿ, ಸಂಗತ, ನ್ಯಾಯಪಥ, ಅರಹು-ಕುರುಹು, ಏನ್ ಸುದ್ಧ, ಬುಕ್ ಬ್ರಹ್ಮ ಮೊದಲಾದ ಅಂತರಜಾಲ ಪತ್ರಿಕೆಗಳಲ್ಲಿ ಹಾಗೂ ಕೆಲ ಪ್ರಾತಿನಿಧಿಕ ಸಂಕಲನಗಳಲ್ಲಿ ಅವು ಪ್ರಕಟವಾಗಿವೆ. ಅಷ್ಟೇಯಲ್ಲದೆ ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನ, ವಿಚಾರ ಸಂಕಿರಣ ಮತ್ತು ಕಮ್ಮಟಗಳಲ್ಲಿ ಭಾಗವಹಿಸಿರುವ ಇವರು ಅನೇಕ ಕನ್ನಡಪರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಉಪನ್ಯಾಸಗಳನ್ನು ನೀಡಿದ್ದಾರೆ. ಬಸವಕಲ್ಯಾಣದ ಡಾ.ಜಯದೇವಿ ತಾಯಿ ಲಿಗಾಡೆ ಪ್ರತಿಷ್ಠಾನದ ನಿರ್ದೇಶಕರಾಗಿ, ಬಸವಕಲ್ಯಾಣ ಕಸಾಪದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪುಷ್ಪಾವತಿ ಚಿಕುರ್ತೆ

ಉದಯೋನ್ಮಖ ಕವಯತ್ರಿ ಪುಷ್ಪಾವತಿ ಚಿಕುರ್ತೆ ಯವರು ಕಮಲನಗರ ತಾಲೂಕಿನ ಖತಗಾಂವ ಗ್ರಾಮದ ಘಾಳೇಪ್ಪಾ ಮತ್ತು ಶಾಂತಮ್ಮಾ ದಂಪತಿಗಳಿಗೆ ದಿನಾಂಕ ೨೦-೭-೧೯೬೯ರಲ್ಲಿ ಜನಿಸಿದ್ದಾರೆ. ಎಂ.ಎ.ಬಿ.ಎಡ್. ಪದವಿಧರರಾದ ಇವರು ಗೋರ್ಟಾ (ಬಿ) ಗ್ರಾಮದ ಅಶೋಕ ಚಿಕುರ್ತೆಯವರ ಧರ್ಮಪತ್ನಿಯಾಗಿದ್ದಾರೆ. ೧೯೯೪ರಲ್ಲಿ ಡೊಣಗಾಂವ(ಎ) ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆಗೆ ಸೇರಿ ನಂತರ ಭಾಲ್ಕಿ ತಾಲೂಕಿನ ವರವಟ್ಟಿ(ಬಿ) ಸರ್ಕಾರಿ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯದಲ್ಲಿ ಆಸಕ್ತರಾಗಿ ಕವನ, ಲೇಖನ, ಹನಿಗವನ ಮೊದಲಾದವು ಬರೆದಿದ್ದು ಅವು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಕವನ ಸಂಕಲನ, ಸ್ಮರಣೆ ಸಂಚಿಕೆ, ಅಭಿನಂದನಾ ಗ್ರಂಥಗಳಲ್ಲಿ ಪ್ರಕಟವಾಗಿವೆ. `ಜೀವನ ವಿಕಾಸದಲ್ಲಿ ಅನಕ್ಷರಸ್ಥರ ಗೋಳು' `ಅಕ್ಕರೆಯ ಅಕ್ಕ' `ಶಿವಾ-ರೇಖಾ' ಇವು ಅವರ ಪ್ರಮುಖ ಕವನಗಳಾಗಿವೆ. ಇವರಿಗೆ ೨೦೦೩ರಲ್ಲಿ ಜನ ಮೆಚ್ಚಿದ ಶಿಕ್ಷಕಿ ಪ್ರಶಸ್ತಿ, ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿಗಳು ಲಭಿಸಿವೆ ಸದ್ಯ ಇವರು ಗೋರ್ಟಾ (ಬಿ) ಗ್ರಾಮದ ನಿವಾಸಿಯಾಗಿ ತಮ್ಮ ಶಿಕ್ಷಕ ವೃತ್ತಿಯೊಂದಿಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದಾರೆ.

ವೀರಶೇಟ್ಟಿ ವಿ. ಮಲ್ಲಶೇಟ್ಟಿ

ಹವ್ಯಾಸಿ ಬರಹಗಾರ ಹಾಗೂ ಪತ್ರಕರ್ತರಾದ ವೀರಶೆಟ್ಟಿ. ವಿ. ಮಲಶೆಟ್ಟಿ ರವರು ಹುಲಸೂರು ತಾಲೂಕಿನ ಬೇಲೂರು ಗ್ರಾಮದ ವೈಜಿನಾಥ ಮತ್ತು ಸಿದ್ದಮ್ಮ ದಂಪತಿಗಳಿಗೆ ದಿನಾಂಕ ೧-೧೧-೧೯೬೬ರಲ್ಲಿ ಜನಿಸಿದ್ದಾರೆ. ಪಿ.ಯುಸಿ ವರೆಗೆ ಅಧ್ಯಯನ ಮಾಡಿದ ಇವರು ಕರ್ನಾಟಕ ಸಂಧ್ಯಕಾಲ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಲೇಖನ ಬರಹಗಳು ಬರೆಯುತ್ತಿರುವ ಇವರು ಕರ್ನಾಟಕ ಸಂಧ್ಯಕಾಲ. ಮಾಹಾಕಯಸ, ಕ್ರಾಂತಿ, ಭಾರತ ವೈಭವ, ಸೇರಿದಂತೆ ಮೊದಲಾದ ಪತ್ರಿಕೆಗಳಲ್ಲಿ ಅವು ಪ್ರಕಟವಾಗಿವೆ. ಇವರಿಗೆ ಬಸವಕಲ್ಯಾಣ ತಾಲೂಕಾ ಆಡಳಿತದಿಂದ `ರಾಜ್ಯೋತ್ಸವ ಪ್ರಶಸ್ತಿ, ಹಾರಕೂಡ ಶ್ರೀಗಳಿಂದ `ಶ್ರೀ ಚನ್ನ ರತ್ನ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ. ಇವರು ಬಸವಕಲ್ಯಾಣ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಸದ್ಯ ಬಸವಕಲ್ಯಾಣದಲ್ಲಿ ವಾಸವಾಗಿದ್ದು, ತಮ್ಮ ವೃತ್ತಿಯೊಂದಿಗೆ ಬರವಣಿಗೆಯನ್ನು ಮುಂದುವರೆಸಿದ್ದಾರೆ.